ಇಂದಿನ ದಿನಗಳಲ್ಲಿ ಪತ್ರಿಕೆಯೊಂದನ್ನು, ಅದೂ ಯಾವುದೇ ಜಾಹೀರಾತಿನ ನೆರವಿಲ್ಲದ, ಭಾರೀ ಆರ್ಥಿಕ ಹಿನ್ನಲೆಯೂ ಇಲ್ಲದ ಮುನ್ನಡೆಸುವುದು ಎಷ್ಟು ಕಷ್ಟ ಅನ್ನುವುದು ನಿಮಗೆ ತಿಳಿದಿದೆ. ಅದರಲ್ಲೂ ಯಾವುದೇ ಲಾಭದ ದೃಷ್ಠಿಯಿಲ್ಲದೆ ಸಮಷ್ಠಿಯ ಒಳಿತಿಗಾಗಿ, ಕಲೆಗೆ ಪುಟ್ಟ ಕಾಣಿಕೆ ನೀಡುವಲ್ಲಿ ಪತ್ರಿಕೆಯೊಂದು ರೂಪುಗೊಳ್ಳುತ್ತಿದೆ ಎಂದಾದಲ್ಲಿ ಅದರ ಹಿಂದಿನ ಸವಾಲುಗಳು ನಿಮಗರಿವಿರಬಹುದು. ಪುಟ್ಟ ಪುಟ್ಟ ಅಡಿಯಿಡುತ್ತಿರುವ ನೂಪುರ ಭ್ರಮರಿಯು ತನ್ನ ಲೇಖನಗಳ ಹಂಚಿಕೆ, ಮುದ್ರಣ, ವಿತರಣೆಗೆ ಬಹಳಷ್ಟು ಸಲ ಸ್ವಾವಲಂಬಿ ನೀತಿಯನ್ನು ಅಂದರೆ ಸ್ವಂತ ಖರ್ಚು-ಉಳಿತಾಯವನ್ನು , ಓದುಗ ಸಹೃದಯರ ಉದಾರತೆಯನ್ನು, [...]
ಭ್ರಮರಿಯ ಬಳಗಕ್ಕೆ ಪ್ರತೀಸಲ ಬರೆಯಬೇಕಾದಾಗಲೂ ಕಾಣುತ್ತಿದ್ದದ್ದು ನೃತ್ಯಕ್ಕೆ ಸಂಬಂಧಿಸಿದಂತೆ ಭಾವನೆಗಳನ್ನು, ವಿಚಾರಗಳನ್ನು ಹಂಚಿಕೊಳ್ಳಲು ಸೂಕ್ತವಾದ ವೇದಿಕೆಯ ಕೊರತೆ; ಜೊತೆಗೆ ಇತರ ಪತ್ರಿಕೆಗಳಲ್ಲೂ ನೃತ್ಯಮಾಧ್ಯಮದ ಕುರಿತಂತೆ ಸಂವಾದ, ಚರ್ಚೆಗಳು, ವಸ್ತುನಿಷ್ಟ ವಿಮರ್ಶೆಗಳು ವಿರಳವಾಗುತ್ತಿದ್ದದ್ದು. ನೃತ್ಯಕ್ಕೆ, ಅದರಲ್ಲೂ ಭರತನಾಟ್ಯಕ್ಕೆ ಸಂಬಂಧಿಸಿದಂತೆ ಕೆಲವು ಪತ್ರಿಕೆಗಳು ಇವೆಯಾದರೂ ಸಾಮಾನ್ಯ ಜನಜೀವನಕ್ಕೆ ತಲುಪುವ ಸಾಧ್ಯತೆ ಇತ್ತೀಚೆಗೆ ಬಹಳ ಕಡಿಮೆಯಾಗುತ್ತ ಹೋಗಿದೆ. ಜೊತೆಗೆ ನೃತ್ಯದ ಕೇವಲ ಶಾಸ್ತ್ರೀಯತೆಯನ್ನಷ್ಟೇ ಅವಲೋಕಿಸದೇ, ಅದರ ಪ್ರಸ್ತುತ ನೆಲೆಗಟ್ಟು, ಸ್ಥಿತಿಗತಿ, ಪರ-ವಿರೋಧ ಅಭಿಪ್ರಾಯಗಳನ್ನು ಹಂಚಿಕೊಳ್ಳಲಿಕ್ಕೆ ಪತ್ರಿಕೆ ಬೇಕೆನ್ನಿಸಿದ್ದು ಹೌದು. ಕೇವಲ ಸಾಮಾಜಿಕ-ಸಾಮುದಾಯಿಕ [...]
ಪತ್ರಿಕೆಗೆ ಎಂತಹ ಹೆಸರಿಟ್ಟರೆ ಒಳಿತು ಎಂಬ ಚರ್ಚೆ ಬಂದಾಗ ಹಲವು ವಿಚಾರಗಳು ಹೊಳೆಯಿತು ಮಂದಿರ, ನಾಟ್ಯ, ನೃತ್ಯ, ಹೆಜ್ಜೆ, ಗೆಜ್ಜೆ, ಕಿಂಕಿಣಿ, ಧೀಂಗಿಣ, ಚಿದಂಬರ ಹೀಗೆ ಹಲ-ಕೆಲವು ಹೆಸರುಗಳು ಸಂಯೋಗಗೊಂಡವು. ಹೀಗೆ ಪತ್ರಿಕೆಗೆ ಹೆಸರಿಡುವ ಪ್ರಕ್ರಿಯೆಗೇ ೪ ತಿಂಗಳು ತೆಗೆದುಕೊಂಡಿದ್ದು ಸುಳ್ಳಲ್ಲ ! ಏಕೆಂದರೆ ಯಾವುದೇ ಸೀಮಿತವರ್ಗದ ಕಲ್ಪನೆಯನ್ನು ಕಟ್ಟಿಕೊಡುವ ಅಂಕಿತ ಪತ್ರಿಕೆಯದ್ದಾಗಿರಬಾರದು; ಜೊತೆಗೆ ನೃತ್ಯ ಲೋಕಕ್ಕೊಂದು ಪರಿಭ್ರಮಣವೇ ಅದಾಗಿರಬೇಕು. ಹಾಗಾಗಿ ನೃತ್ಯ - ನಾಟ್ಯ ಎಂಬ ಹೆಸರಿನ ಕ್ಲೀಷೆಗಳನ್ನು ಬದಿಗಿಟ್ಟು ನೂಪುರ ಭ್ರಮರಿ ಎಂಬ ಹೆಸರನ್ನು [...]
ನೂಪುರ ಭ್ರಮರಿಯ ಪ್ರಥಮ ಸಂಚಿಕೆ ಅನಾವರಣಗೊಂಡದ್ದು ಮಡಿಕೇರಿಯಲ್ಲಿ ಶಿವರಾತ್ರಿಯಂದು. ಶಕ್ತಿ ದೈನಿಕದ ಸಹ ಸಂಪಾದಕ ಶ್ರೀಯುತ ಬಿ. ಜಿ. ಅನಂತಶಯನ, ಆಯುರ್ವೇದ ವೈದ್ಯ, ಸಾಹಿತಿ ನಡಿಬೈಲು ಉದಯಶಂಕರ, ಹಾಗೂ ನೃತ್ಯ ಮಂಟಪದ ಶ್ರೀಮತಿ ರೂಪಾ ಶ್ರೀಕೃಷ್ಣ ಉಪಾಧ್ಯ ಅವರು ಪತ್ರಿಕೆಯನ್ನು ಮೊದಲು ತೆರೆದಿಟ್ಟವರು. ಒಂದು ಶುಭ ಸಂದರ್ಭದಲ್ಲಿ ಶುಭಾಂಸನೆ ಪಡೆದುಕೊಂಡ ನೂಪುರ ಭ್ರಮರಿಯ ಯಾತ್ರೆ ನಿರಂತರವಾಗಿ ನಡೆಯಬೇಕೆಂಬುದು ನಮ್ಮೆಲ್ಲರ ಕನಸು.
ವಾರ್ಷಿಕ ಸಂಭ್ರಮ ನೆರವೇರಿದ್ದು ಮಡಿಕೇರಿಯ ಭಾರತೀಯ ವಿದ್ಯಾಭವನದಲ್ಲಿ. ಯಕ್ಷಗಾನ ಕಲಾವಿದ ಸರ್ಪಂಗಳ ಈಶ್ವರ ಭಟ್ ಅವರ ಅಧ್ಯಕ್ಷತೆಯಲ್ಲಿ [...]