ಅನಭಿಷಿಕ್ತ ರಾಣಿ : ರುಕ್ಮಿಣೀ ದೇವಿ ( ಹೇಮಂತ ಋತು ಗಾನ ೨೦೦೯)
Tuesday, December 15th, 2009
ಆಲದ ಮರ ಬೆಳೆಯಲು ನಿಧಾನಗತಿ ಅನುಸರಿಸಿದರೂ ತಳವೂರಿ ಅಗಾಧವಾಗಿ ಹರಡುತ್ತದೆ. ಅಂತೆಯೇ ಗುರುಕುಲ ಪದ್ಧತಿಯ ಬೇರುಗಳೂ ಕೂಡಾ ! ಅದಕ್ಕೆ ರೂಪಕವೋ ಎಂಬಂತೆ ಹೆಚ್ಚಿನ ಪಾಠಗಳು ಅಡ್ಯಾರ್ನ ದೈತ್ಯ ಆಲದ ಮರಗಳ ನೆರಳಿನಲ್ಲಿಯೆ ನಡೆಯುತ್ತಿದ್ದವು. ರುಕ್ಮಿಣೀದೇವಿ ಸ್ವತಃ ತಾವೇ ನೃತ್ಯ ಪಾಠ ಮಾಡುತ್ತಿದ್ದರು. ಅದೇ ಆವರಣದಲ್ಲಿ ವಿದ್ಯಾರ್ಥಿಗಳ ಪ್ರೌಢ ಶಿಕ್ಷಣಕ್ಕೆ ಅನುಕೂಲವಾಗಲು ಬೆಸೆಂಟ್ ಥಿಯೋಸೋಫಿಕಲ್ ಹೈಸ್ಕೂಲ್ ಕೂಡಾ ಇತ್ತು. ಇದರ ಮುಖ್ಯೋಪಾಧ್ಯಾಯರಾದ ಶಂಕರ ಮೆನನ್ ಹಿಂದೂ ತತ್ವಜ್ಞಾನದ ಪಾಠಗಳನ್ನು ಮಾಡುತ್ತಿದ್ದರು. [...]







