ಅಂಕಣಗಳು

ನೂಪುರ ಪತ್ರಿಕೆ

‘ಮುದ್ರಾರ್ಣವ’ದ ಮೋಹಕ ಮೇಘಮಲ್ಹಾರ… : ಅನಾವರಣದಲ್ಲರಳಿದ ಅಲೆಗಳು

ಬಿಂಬ ಭ್ರಮರಿ

ನಿಮ್ಮ ಸಹಕಾರ

ನ್ಯೂಸ್ ಲೆಟರ್

Your email:

 

‘ಮುದ್ರಾರ್ಣವ’ದ ಮೋಹಕ ಮೇಘಮಲ್ಹಾರ… : ಅನಾವರಣದಲ್ಲರಳಿದ ಅಲೆಗಳು

Wednesday, February 3rd, 2010
‘ಮುದ್ರಾರ್ಣವ’ದ ಮೋಹಕ ಮೇಘಮಲ್ಹಾರ… : ಅನಾವರಣದಲ್ಲರಳಿದ ಅಲೆಗಳು

ನೂಪುರದ ಬಳಗಕ್ಕೆ ಅಂದು ಕಣ್ತುಂಬಿಕೊಳ್ಳುವ ಹಬ್ಬ. ಇನ್ನೇನು ವಾರ್ಷಿಕ ಸಂಭ್ರಮಕ್ಕೆ ಎರಡು ತಿಂಗಳಿರುವಾಗಲೇ, ಮೂರನೇ ವರ್ಷಾಂತ್ಯವಾಗುವುದರೊಳಗೆ ಸಂತಸದ ಸಂದರ್ಭಗಳಿಗೆ ಮುನ್ಸೂಚನೆಯೇನೋ ಎಂಬಂತೆ ವಿದ್ವತ್ಪೂರ್ಣ ಕ್ಷಣಗಳನ್ನು ಬರಮಾಡಿಕೊಂಡ ಸಾಂಗತ್ಯ. ನವೆಂಬರ್ ೨೨. ಸಂಜೆ ೪.೩೦. ವಿಮರ್ಶಕ, ಲೇಖಕ ವಿ.ಬಿ. ಅರ್ತಿಕಜೆ, ಹಾಸ್ಯ ಸಾಹಿತಿ ಕು.ಗೋ, ನಾಟ್ಯಾಚಾರ್ಯರುಗಳಾದ ಕಮಲಾಕ್ಷಾಚಾರ್, ದೀಪಕ್ ಕುಮಾರ್, ಉಜಿರೆ ಕಾಲೇಜಿನ ಕಲಾಸಕ್ತ ಉಪನ್ಯಾಸಕರು, ಕಲಾರಸಿಕ ವಿದ್ಯಾರ್ಥಿಗಳು, ಊರಿನ ಹೆಮ್ಮೆಯ ನಾಗರಿಕರು ಮುಂತಾಗಿ; ಕೆಲವೇ ಕ್ಷಣಗಳ ಅವಧಿಯಲ್ಲಿ ಉಜಿರೆಯ ಶ್ರೀ [...]

‘ಮುದ್ರಾರ್ಣವ’

Thursday, November 19th, 2009
‘ಮುದ್ರಾರ್ಣವ’

ಆತ್ಮೀಯರೇ,
ಸಂವಹನ ಮಾಧ್ಯಮವಾಗಿ, ಶಾಸ್ತ್ರೀಯ ಪರಿಭಾಷೆಯಾಗಿ ಹಸ್ತಮುದ್ರೆಗಳ ಪಾತ್ರ ಹಿರಿದಿದ್ದರೂ, ಇವುಗಳ ಕುರಿತಂತೆ ನಡೆದ ಅಧ್ಯಯನಗಳು ಬಹಳ ವಿರಳ. ಅದರಲ್ಲೂ ಸಂಹವನ ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಳ ಕುರಿತಂತೆ ಆಳವಾದ ಪರಿಶೋಧನೆಗಳು ಜರುಗಿಲ್ಲ. ಸಾಮಾನ್ಯವಾಗಿ ಈ ಮುದ್ರೆಗಳನ್ನು ಸೌಂದರ್ಯ ಸೂಚಕಗಳಾಗಿ ಪರಿಗಣಿಸುತ್ತಾರೆಯೇ ವಿನಃ, ಸಾಮಾಜಿಕ ಅಥವಾ ಸಂವಹನದ ದೃಷ್ಟಿಯಲ್ಲಿ ಚಿಂತಿಸಲ್ಪಡುವುದಿಲ್ಲ. ಹಸ್ತವಿನ್ಯಾಸಗಳ ಬಗೆಗೆ ವಿವರಣೆಯಿರುವ ಪುಸ್ತಕಗಳಿವೆಯೇ ಹೊರತು ಸಂಶೋಧನಾತ್ಮಕ ಅಧ್ಯಯನಗಳು ನಡೆದಿಲ್ಲ. ಹಾಗಾಗಿ ಒಂದು ನೆಲೆಗಟ್ಟಿನಿಂದ ನೋಡಿದಾಗ `ಸಂವಹನ ಮಾಧ್ಯಮವಾಗಿ ಹಸ್ತಮುದ್ರೆಗಳು’ ಎಂಬ ವಿಷಯ ಸಂಶೋಧಕರ ಗಮನ ಸೆಳೆದಿಲ್ಲವೆಂದೇ ಹೇಳಬೇಕು. [...]

ದೃಷ್ಟ-ಅದೃಷ್ಟ ಮತ್ತು ನೂಪುರ ಭ್ರಮರಿ

Thursday, August 13th, 2009
ದೃಷ್ಟ-ಅದೃಷ್ಟ ಮತ್ತು ನೂಪುರ ಭ್ರಮರಿ

ಪ್ರಸ್ತುತ ಪುತ್ತೂರಿನ ಬೆಳ್ಳಾರೆಯ ಸನಿಹದ ಎಳ್ಯಡ್ಕದಲ್ಲಿ ವಿಶ್ರಾಂತ ಜೀವನ ನಡೆಸುತ್ತಿರುವ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಈಶ್ವರ ಭಟ್ ಎಳ್ಯಡ್ಕ ಅವರ ಆತ್ಮಕಥನ ದೃಷ್ಟ- ಅದೃಷ್ಟಕ್ಕೆ ನೂಪುರ ಭ್ರಮರಿಯನ್ನು ನಿರ್ವಹಿಸುತ್ತಿರುವ ಶ್ರೀ ಸಾನ್ನಿಧ್ಯ ಪ್ರಕಾಶನವು ಪುಸ್ತಕರೂಪವನ್ನಿತ್ತು, ಮೇ ೨೫ರಂದು ಎಳ್ಯಡ್ಕದಲ್ಲಿ ನಡೆದ ಸಮಾರಂಭದಲ್ಲಿ ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಗಳಿಂದ ಲೋಕಾರ್ಪಣಗೊಳಿಸಲಾಯಿತು.

ಖ್ಯಾತ ಕಲಾವಿದರ ಒಗ್ಗೂಡುವಿಕೆಯಲ್ಲಿ ತಾಳಮದ್ದಳೆ ಕಾರ್ಯಕ್ರಮದೊಂದಿಗೆ ; ನೂಪುರ ಭ್ರಮರಿಯ ಗ್ರೀಷ್ಮ ಗಾಂಭೀರ್ಯ ಸಂಚಿಕೆಯನ್ನೂ ಅನಾವರಣಗೊಳಿಸಿ, ಆಶೀರ್ವದಿಸಿದ [...]