ಮಂಜೀರ (ಶಿಶಿರ ಶೃಂಗಾರ ೨೦೧೦)
Monday, February 15th, 2010ಕಾದು, ಕಾತರಿಸಿ, ಕನವರಿಸಿ, ನೊಂದು-ಬೆಂದು ನಡೆದು ಪಡೆದ ಖುಷಿ ಎಂದೆಂದಿಗೂ ಇಮ್ಮಡಿಯಾಗುತ್ತಲೇ ಇರುತ್ತದೆ ಎಂಬ ಮಾತು ಸುಳ್ಳಲ್ಲ. ಇಂದಿಗೆ ವಿಶಾಲ ಬಯಲಿನಲ್ಲಿ, ಎತ್ತರದ ಅವಕಾಶದಲ್ಲಿ, ಅನಂತ ಸಾಗರದ ಅಲೆಗಳ ನಡುವೆ ಜೋರಾಗಿ ‘ಹುರ್ರೇ’ ಎಂದು ಮನಬಿಚ್ಚಿ ಕೂಗಿ ಧ್ವನಿಗೈಯ್ಯಬೇಕೆನ್ನಿಸುತ್ತಿದೆ. ಅವು ಮಾರ್ದನಿಯಾಗಿ ನಿತ್ಯವೂ ಅನುರಣಿಸಬೇಕೆನ್ನಿಸುತ್ತಿದೆ. ಕಾರಣ ; ನೂಪುರ ಭ್ರಮರಿ ರಿಜಿಸ್ಟ್ರಾರ್ ಆಫ್ ನ್ಯೂಸ್ ಪೇಪರ್ಸ್ ಫಾರ್ ಇಂಡಿಯಾದಿಂದ ನೋಂದಾವಣೆಗೊಂಡಿದೆ ! ಇದರಲ್ಲೇನಿದೆ? ಸಾಮಾನ್ಯ. ಕಾಣಿಸುವುದು ಸಹಜ. ಆದರೆ ಕಳೆದ ಮೂರು ವರ್ಷಗಳಲ್ಲಿ ನೂಪುರದ [...]


